ಸಾಮರಸ್ಯದ ತಾಣಗಳಾಗಿ ಶಿಂಷಾ ಮಾರಮ್ಮ ದೇಗುಲ ಹಾಗೂ ಹಜರತ್ ಮರ್ದಾನಿ ಗೈಬ್ ದರ್ಗಾ

Main Article Content

ಹೇಮಲತ ಪಿ. ಎನ್.

Abstract

ಕನ್ನಡ ನಾಡಿನಲ್ಲಿ ಪ್ರಾಚೀನ ಕಾಲದಿಂದಲೂ ಸಾಮರಸ್ಯವನ್ನು ಪ್ರತಿಬಿಂಬಿಸುವ ಅನೇಕ ಘಟನೆಗಳು ನಡೆಯುತ್ತಾ ಬಂದಿವೆ; ಅನೇಕ ಸ್ಥಳಗಳು ರೂಪುಗೊಂಡಿವೆ. ಸಂತ ಸಮುದಾಯವು ಸಾಮಾಜಿಕ ಸಾಮರಸ್ಯಕ್ಕಾಗಿ ಬೋಧಿಸುತ್ತಾ ನಡೆದು ಕನ್ನಡ ಸಂಸ್ಕೃತಿಯಲ್ಲಿ ಬಹುದೊಡ್ಡ ಕ್ರಾಂತಿಯನ್ನುಂಟುಮಾಡಿರುವುದು ಚಾರಿತ್ರಿಕ ಸಂಗತಿಯಾಗಿದೆ. ಕರ್ನಾಟಕದ ಅನೇಕ ಸಂತರೂ ಮತ್ತು ಅವರ ಶಿಷ್ಯಂದಿರ ಸೇವಾಕಾರ್ಯದ ಪ್ರಭಾವದಿಂದಾಗಿ ಸಾಮಾಜಿಕ ಸ್ವಾಸ್ಥ್ಯವೂ ಸಾಮರಸ್ಯವೂ ಸಾಧಿತಗೊಂಡು ಇಂದಿಗೂ ಜನಸಮುದಾಯಗಳು ಒಕ್ಕಲಾಗಿ ನಡೆದುಕೊಳ್ಳುತ್ತಿದ್ದಾರೆ. ಕಾವೇರಿ ನದಿಯ ಉಪನದಿಯಾದ ಶಿಂಷಾ ಹರಿವಿನ ಮಾರ್ಗದಲ್ಲಿ ರೂಪುಗೊಂಡಿರುವ ಶಿಂಷಾ ಮಾರಮ್ಮ ದೇವಾಲಯ, ಶಿವನಸಮುದ್ರ ದರ್ಗಾ ಅಥವಾ ದರ್ಗಾ ಹಜರತ್ ಮರ್ದಾನಿ ಗೈಬ್ ತಾಣಗಳು ಸಾಮಾಜಿಕ ಸಾಮರಸ್ಯಕ್ಕೆ ಹೆಸರುವಾಸಿಯಾಗಿವೆ.

Article Details

Section

Research Articles

Author Biography

ಹೇಮಲತ ಪಿ. ಎನ್.

ನಂ. 1156, 4/10ನೆ ಮುಖ್ಯರಸ್ತೆ, ಇ & ಎಫ್ ಬ್ಲಾಕ್, ರಾಮಕೃಷ್ಣನಗರ, ಮೈಸೂರು.

References

ಪರಮಶಿವಯ್ಯ ಜೀ. ಶಂ. (ಸಂ). (1973). ಶ್ರೀ ಮಂಟೇಸ್ವಾಮಿ ಮಹಾಕಾವ್ಯ. ಸಾಹಿತ್ಯ ಸದನ. ಮೈಸೂರು.

ಅಂಬಳಿಕೆ ಹಿರಿಯಣ್ಣ. (2009). ದಕ್ಷಿಣ ಕರ್ನಾಟಕದ ಮಂಟೇಸ್ವಾಮಿ ಕಾವ್ಯಪರಂಪರೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ. ಹಾವೇರಿ.

Lieutenant H Jervis. (1834). Narrative of a Journey to the Falls of the Cavery; with an historical and descriptive account of the Neilgherry Hills. Smith, Elder & Co. London.

ಮಂಡ್ಯ ಜಿಲ್ಲೆಯ ಗೆಜೆಟಿಯರ್. (2003). ಕರ್ನಾಟಕ ಗ್ಯಾಸೆಟಿಯರ್ ಇಲಾಖೆ. ಕರ್ನಾಟಕ ಸರ್ಕಾರ. ಬೆಂಗಳೂರು.

ಕರ್ನಾಟಕ ಕೈಪಿಡಿ. (2017). ಕರ್ನಾಟಕ ಗ್ಯಾಸೆಟಿಯರ್ ಇಲಾಖೆ. ಕರ್ನಾಟಕ ಸರ್ಕಾರ. ಬೆಂಗಳೂರು.

ಕರ್ನಾಟಕ ಗೆಜೆಟಿಯರ್: ಸಂಪುಟ-1 ಮತ್ತು 2. (1982). ಕರ್ನಾಟಕ ಗ್ಯಾಸೆಟಿಯರ್ ಇಲಾಖೆ. ಕರ್ನಾಟಕ ಸರ್ಕಾರ. ಬೆಂಗಳೂರು.