ಆಧುನಿಕ ಕನ್ನಡ ರಂಗಭೂಮಿಯಲ್ಲಿ ರಂಗನಿರ್ದೇಶಕರಾಗಿ ಬಿ. ವಿ. ಕಾರಂತರ ಕೊಡುಗೆ
Main Article Content
Abstract
ಆಧುನಿಕ ಕನ್ನಡ ರಂಗಭೂಮಿಯ ನಿರ್ದೇಶಕರಾಗಿರುವ ಬಿ. ವಿ. ಕಾರಂತ ಅವರು ಬಾಲ್ಯದಲ್ಲಿ ಬೆಳೆದದ್ದು ಕನ್ನಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ. ಅವರ ಕಣ್ಣುಗಳು, ಮತ್ತು ಕಿವಿಗಳು ಯಕ್ಷಗಾನ, ಜಾತ್ರೆ, ಕೋಲ, ರಥೋತ್ಸವ, ಪದ-ದಾನಗಳು ಮತ್ತು ವಿವಿಧ ಸಂಗೀತ ವಾದ್ಯಗಳ ಧ್ವನಿ ವಿನ್ಯಾಸಗಳಿಗೆ ತೆರೆದುಕೊಂಡವು. ಇವರು ಪ್ರಸಿದ್ಧ ಗುಬ್ಬಿ ವೀರಣ್ಣ ಕಂಪನಿಯವರು ಪುತ್ತೂರಿನಲ್ಲಿ ಬೀಡುಬಿಟ್ಟಾಗ ಅಲ್ಲಿ ‘ಕೃಷ್ಣಲೀಲಾ’ ನಾಟಕವನ್ನು ನೋಡಿ ನಾಟಕದ ಕಡೆಗೆ ಆಸಕ್ತರಾದರು. ನಂತರ ಅವರು ಗುಬ್ಬಿ ಕಂಪನಿಗೆ ಸೇರಿಕೊಂಡರು. ಅವರು ಡಾ. ರಾಜಕುಮಾರರಂತಹ ಹಿರಿಯರ ನಟರ ಜೊತೆಗೆ ಅಭಿನಯವನ್ನು ಮಾಡಿದರು. ಗುಬ್ಬಿ ವೀರಣ್ಣನವರು ಕಾರಂತರನ್ನು ಸ್ನಾತಕೋತ್ತರ ಪದವಿ ಅಭ್ಯಾಸಕ್ಕೆ ಬನಾರಸ್ ವಿಶ್ವವಿದ್ಯಾಲಯಕ್ಕೆ ಕಳುಹಿಸಿದರು. ಅಲ್ಲಿ ಅವರು ಹಿಂದೂಸ್ತಾನಿ ಸಂಗೀತವನ್ನು ಕಲಿತರು. ಅಲ್ಲಿಯ ರಂಗಭೂಮಿ ಮತ್ತು ಹಿಂದಿ ನಾಟಕಗಳ ಬಗ್ಗೆ ಪಿಹೆಚ್. ಡಿ ಪದವಿಯನ್ನು ಪಡೆದರು. 1962ರಲ್ಲಿ ನವದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಸಂಸ್ಥೆಯಿಂದ ಪದವಿ ಪಡೆದರು.
ದೆಹಲಿಯಲ್ಲಿ ಕನ್ನಡದಲ್ಲಿ ಪ್ರಸಿದ್ಧ ನಾಟಕಗಳನ್ನು ಬರೆದು ನಿರ್ದೇಶಿಸಿದರು. ದೆಹಲಿಯ ಗೆಳೆಯರೊಂದಿಗೆ ಸೇರಿಕೊಂಡು ಕನ್ನಡ ಭಾರತಿ ಆರಂಭಿಸಿ ಅಲ್ಲಿ ಗಹನ ನಾಟಕಗಳನ್ನು ನಿರ್ಮಿಸಿದರು. 1970ರಲ್ಲಿ ಬೆಂಗಳೂರಿಗೆ ಬಂದು ರಂಗಭೂಮಿಗೆ ನವೀನ ತಂತ್ರಗಳು, ವೈಭವ, ಸಂಗೀತ, ಮತ್ತು ನೃತ್ಯವನ್ನು ತರುವ ಮೂಲಕ ಕನ್ನಡ ರಂಗಭೂಮಿಯಲ್ಲಿ ಕಂಪನ್ನು ಸೃಷ್ಟಿಸಿದರು. ಭಾರತದಲ್ಲಿಯೇ ರಂಗಭೂಮಿ ಸಂಗೀತದಲ್ಲಿ ವಿಭಿನ್ನ ರೂಪಗಳನ್ನು ಬೆರೆಸುವ ಮೂಲಕ ಕನ್ನಡ ರಂಗಭೂಮಿಯನ್ನು ಬೆಳೆಸಿದರು. ನಂತರ ಇಬ್ರಾಹಿಂ ಅಲ್ಯಾಜಿ ನೇತೃತ್ವದಲ್ಲಿ 1969 ಮತ್ತು 1972 ರ ನಡುವೆ ಅವರು ನವದೆಹಲಿಯ ಸರ್ದಾರ್ ಪಟೇಲ್ ವಿದ್ಯಾಲಯದಲ್ಲಿ ನಾಟಕ ಶಿಕ್ಷಕರಾಗಿ ಕೆಲಸ ಮಾಡಿದರು. ನಂತರ ದಂಪತಿಗಳು ಬೆಂಗಳೂರಿಗೆ ಮರಳಿದರು.
ಕಾರಂತರು ನೂರಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಅದರಲ್ಲಿ ಅರ್ಧದಷ್ಟು ಕನ್ನಡ ಭಾಷೆಯಲ್ಲಿವೆ. ಅವರು ಹಯವದನ, ಕತ್ತಲೆ ಬೆಳಕು, ಹುಚ್ಚು ಕುದುರೆ, ಏವಂ ಇಂದ್ರಜಿತ್, ಈಡಿಪಸ್, ಸಂಕ್ರಾಂತಿ, ಜೋಕುಮಾರ ಸ್ವಾಮಿ, ಸತ್ತವರ ನೇರಳು, ಹುಟ್ಟುವ ಬಡಿದರೆ, ಕಿಂದರಿ ಜೋಗಿ, ಚಂದ್ರಹಾಸ ಮತ್ತು ಗೋಕುಲ ನಿರ್ಗಮನ ನಾಟಕಗಳಲ್ಲದೆ, ಪಂಜರ ಶಾಲೆ, ನೀಲಿ ಕುದುರೆ, ಹೆಡ್ಡಾಯಣ, ಅಳಿಲು ರಾಮಾಯಣ ಮುಂತಾದ ಹಲವಾರು ಮಕ್ಕಳ ನಾಟಕಗಳನ್ನೂ ಸಹ ನಿರ್ದೇಶಿಸಿದ್ದಾರೆ. ಇವರ ನಿರ್ದೇಶನದ ನಾಟಕಗಳೆಂದರೆ ಪ್ರೇಕ್ಷಕರಿಗೆ ಎಲ್ಲಿಲ್ಲದ ಆಸಕ್ತಿ. ಹಾಗಾಗಿ ಅವರು ಅಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ರಂಗಾಯಣ ಸಂಸ್ಥೆಯ ಹುಟ್ಟಿಗೆ ಕಾರಣರಾದರು. 1981ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ರಂಗಭೂಮಿಗೆ ಸಲ್ಲಿಸಿದ ಅಮೋಘ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು. ಕರ್ನಾಟಕ ಸರ್ಕಾರವು ಕನ್ನಡ ರಂಗಭೂಮಿಗೆ ಅವರ ಕೊಡುಗೆಗಾಗಿ ಗುಬ್ಬಿ ವೀರಣ್ಣ ಪ್ರಶಸ್ತಿಯನ್ನು ನೀಡಿದೆ. ಹೀಗೆ ಅವರು ಭಾರತದ ಹಲವು ಭಾಷೆಗಳಲ್ಲಿನ ರಂಗಭೂಮಿಗೆ ತಮ್ಮದೇ ಆದ ಕೊಡುಗೆಯನ್ನು ನೀಡುವುದರ ಜೊತೆಗೆ ತಮ್ಮ ಮಾತೃಭಾಷೆಯಾಗಿರುವ ಕನ್ನಡ ರಂಗಭೂಮಿಗೂ ತಮ್ಮ ಅಮೂಲ್ಯ ಕೊಡುಗೆಯನ್ನು ಕೊಟ್ಟಿರುವುದು ವೈಶಿಷ್ಟ್ಯಪೂರ್ಣವಾಗಿದೆ.
Article Details
Issue
Section

This work is licensed under a Creative Commons Attribution-NonCommercial-ShareAlike 4.0 International License.
References
ಅಕ್ಷರ ಕೆ. ವಿ. , (2010), ರಂಗ ಪ್ರಪಂಚ, ಅಕ್ಷರ ಪ್ರಕಾಶನ, ಹೆಗ್ಗೋಡು.
ಅಕ್ಷರ ಕೆ. ವಿ. , (1999), ರಂಗ ಪ್ರಯೋಗ, ಅಕ್ಷರ ಪ್ರಕಾಶನ, ಹೆಗ್ಗೋಡು.
ಮರುಳು ಸಿದ್ದಪ್ಪ ಕೆ. , (2015), ಆಧುನಿಕ ಕನ್ನಡ ಕನ್ನಡ ರಂಗಭೂಮಿ, ಅಕಿಂತ ಪ್ರಕಾಶನ, ಬೆಂಗಳೂರು.
ರಂಗನಾಥ ಎಚ್. ಕೆ. , (1978), ಕರ್ನಾಟಕ ರಂಗಭೂಮಿ, ಹೇಮಂತ ಸಾಹಿತ್ಯ ಪ್ರಕಾಶನ, ಬೆಂಗಳೂರು.
ಕಾರಂತ ಬಿ. ವಿ. (ಲೇ), ವೈದೇಹಿ (ನಿರೂಪಣೆ), (2003), ಇಲ್ಲಿರಲಾರೆ, ಅಲ್ಲಿಗೆ ಹೋಗಲಾರೆ: ಬಿ. ವಿ. ಕಾರಂತರ ಬದುಕಿನ ಅನುಭವಗಳ ಕಥನ, ಅಭಿನವ ಪ್ರಕಾಶನ, ಬೆಂಗಳೂರು.