ಬಸವಣ್ಣನವರ ವಚನಗಳಲ್ಲಿ-ಜಾತಿ ನಿರಾಕರಣೆ

Main Article Content

ಕುಮಾರಯ್ಯ ಡಿ.ಎಸ್.

Abstract

ಹನ್ನೇರಡನೆ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಶರಣ ಸಮಾಜವು ಕುಲ, ಮತ, ಲಿಂಗ, ವರ್ಣ, ವರ್ಗಇವುಗಳಿಂದ ಮುಕ್ತವಾಗಿತ್ತು. ಬಸವಣ್ಣನವರು ಜಾತಿಯ ವಿಷ ಬೀಜವನ್ನು ಕಿತ್ತು ನವ ಸಮಾಜದಲ್ಲಿ ಹೇಗೆ ಬದುಕಬೇಕೆಂದು ಸಾರಿದರು. ಮನುಧರ್ಮದ ಕರ್ಮಸಿದ್ದಾಂತವನ್ನು ಬಸವಣ್ಣನವರು ಅಲ್ಲಗಳೆದು ಕಾಯಕ ಸಿದ್ಧಾಂತವನ್ನು ಕಾರ್ಯಗತಗೊಳಿಸಿದರು. ಬಸವಣ್ಣನವರ ಚಿಂತನೆಗಳಲ್ಲಿ ಜಾತಿ ನಿರಾಕರಣೆಯೂ ಸಹ ಮಹತ್ವವಾದ ಚಿಂತನೆಯಾಗಿದೆ. ಜಾತಿ ನಿರಾಕರಣೆ ವಿಚಾರದಲ್ಲಿ ಎಲ್ಲರಿಗಿಂತ ಹೆಚ್ಚು ಮಾನಸಿಕ ಸಂಘರ್ಷವನ್ನು ಹೊಂದಿದವನು ಬಸವಣ್ಣನವರು, ಇಲ್ಲದಿದ್ದರೆ ‘ಉತ್ತಮ ಕುಲದಲ್ಲಿ ಹುಟ್ಟಿದನೆಂಬ ಕಷ್ಟತನದ ಹೊರೆಯ ಹೊರಿಸದಿರಯ್ಯ ಎಂದು ಹೇಳುವ ನೋವು ಏಕಿರಬೇಕಿತ್ತು?’ ಉತ್ತಮ ಜಾತಿ ಸಂಕೋಲನೆಯಿಂದ ಬಿಡಿಸಿಕೊಂಡು ಹೊರಬರುವುದಕ್ಕಾಗಿ ತಾನು ಹುಟ್ಟಿದ ಜಾತಿಯನ್ನು ನಿರಾಕರಣೆ ಮಾಡುತ್ತಾನೆ. ಜಾತಿ ಎಂಬ ಹೆಮ್ಮೆರವನ್ನು ಬುಡಸಮೇತ ಕಿತ್ತು ಹಾಕಲು ಅಂತರ್ಜಾತಿ ವಿವಾಹವನ್ನು ಸಹ ಬಸವಣ್ಣನವರು ಮಾಡುತ್ತಾರೆ. ಇದರೊಂದಿಗೆ ನವ ಸಮಾಜದ ಸೃಷ್ಟಿಗೆ ಕಾರಣನಾಗುತ್ತಾನೆ. ಇಂತಹ ಎಲ್ಲಾ ಅಂಶವನ್ನು ಕುರಿತು ಬಸವಣ್ಣನವರ ವಚನಗಳಲ್ಲಿ ಜಾತಿ ನಿರಾಕರಣೆ ಹೇಗೆ ಮೂಡಿ ಬಂದಿದೆ ಎಂದು ಅರಿಯಬಹುದು. 

Article Details

Section

Research Articles

Author Biography

ಕುಮಾರಯ್ಯ ಡಿ.ಎಸ್.

ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು. 

 

References

ಬಸವರಾಜು ಎಲ್., (2012), ಬಸವಣ್ಣನವರ ವಚನಗಳು, ಸ್ವಪ್ನ ಬುಕ್ ಹೌಸ್, ಬೆಂಗಳೂರು.

ವೀರಣ್ಣ ರಾಜೂರ, (2021), ಬಸವಣ್ಣನವರ ವಚನ ಸಂಪುಟ-1, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು.

ಗಿರಿಜಾಪತಿ ಎನ್.ಎಂ., (2019), ವಚನ ರತ್ನತ್ರಯರು, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು.