ಶಿಕ್ಷಣವೆಂದರೆ ಜೀವನಕ್ಕೆ ಸಿದ್ಧತೆಯಲ್ಲ, ಶಿಕ್ಷಣವೇ ಜೀವನ
Main Article Content
Abstract
ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದಂತೆ. ಶಿಕ್ಷಣ ಜೀವನಕ್ಕೆ ಸಿದ್ಧತೆ ಮಾತ್ರವಲ್ಲ, ಅದು ಜೀವನವೇ ಆಗಿದೆ. ಶಿಕ್ಷಣವು ಕೇವಲ ಉದ್ಯೋಗ ಅಥವಾ ಜೀವನೋದ್ಯಮಕ್ಕೆ ಪೂರಕವಾಗಿರುವುದಷ್ಟೇ ಅಲ್ಲ, ಅದು ವ್ಯಕ್ತಿಯ ಬುದ್ಧಿ, ಚಿಂತನೆ, ವ್ಯಕ್ತಿತ್ವ ಮತ್ತು ಸಮಾಜದ ಪ್ರಗತಿಗೆ ಸಹಾಯಕವಾಗಬೇಕು. ಅಂಬೇಡ್ಕರ್ ಅವರ ದೃಷ್ಟಿಯಲ್ಲಿ ಶಿಕ್ಷಣವು ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾಭ್ಯಾಸವು ವ್ಯಕ್ತಿಗೆ ಅರ್ಥಪೂರ್ಣ ಬದುಕನ್ನು ಕಟ್ಟಿಕೊಳ್ಳಲು, ಸ್ವತಂತ್ರವಾಗಿ ಚಿಂತಿಸಲು, ಹಾಗೂ ತಾನು ಎದುರಿಸುವ ಸವಾಲುಗಳಿಗೆ ಉತ್ತರಿಸಲು ಶಕ್ತಿಯನ್ನು ನೀಡುತ್ತದೆ. ಸಮೃದ್ದ ಜೀವನಕ್ಕಾಗಿ ಕೇವಲ ಹಣಕಾಸಿನ ಪ್ರಗತಿಯನ್ನಷ್ಟೇ ಗಮನಿಸುವುದಕ್ಕಿಂತ, ಮಾನವೀಯತೆ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಕಾಪಾಡುವುದು ಶಿಕ್ಷಣದ ಮುಖ್ಯ ಉದ್ದೇಶವಾಗಿದೆ. ಆದ್ದರಿಂದ, ಶಿಕ್ಷಣವೇ ಜೀವನವೆಂದರೆ, ಅದು ವ್ಯಕ್ತಿಯ ಸಾಂಸ್ಕೃತಿಕ, ಬೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ನಿರಂತರವಾಗಿ ನಡೆಸುವ ಪ್ರಕ್ರಿಯೆಯಾಗಿರಬೇಕು. ಈ ಸತ್ಯವನ್ನು ಅರಿತುಕೊಂಡಾಗಲೇ ನಾವು ಒಂದು ಪ್ರಬುದ್ಧ, ಪ್ರಗತಿಪರ ಸಮಾಜವನ್ನು ನಿರ್ಮಿಸಬಹುದು.
Article Details
Section

This work is licensed under a Creative Commons Attribution-NonCommercial-ShareAlike 4.0 International License.
How to Cite
References
ಅಂಬೇಡ್ಕರ್ ಬಿ.ಆರ್., (2015), ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳು: ಸಂಪುಟ-1-21, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು.
ಸಿದ್ಧಲಿಂಗಯ್ಯ (ಸಂ), (2015), ಡಾ. ಬಿ.ಆರ್. ಅಂಬೇಡ್ಕರ್ ಅವರ ಆಯ್ದ ಬರಹಗಳು, ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು.
ಸುಜ್ಞಾನಮೂರ್ತಿ ಬಿ., (2017), ಅಂಬೇಡ್ಕರ್ ದೃಷ್ಟಿಯಲ್ಲಿ ಸಾಮಾಜಿಕ ಸಬಲೀಕರಣ, ಲಡಾಯಿ ಪ್ರಕಾಶನ, ಗದಗ.
ಪೋತೆ ಎಚ್.ಟಿ., (2019), ಡಾ. ಬಿ.ಆರ್. ಅಂಬೇಡ್ಕರ್ ಪುಸ್ತಕ ಪ್ರೀತಿ, ಕುಟುಂಬ ಪ್ರಕಾಶನ, ಕಲಬುರ್ಗಿ.
ದತ್ತೋಪಂತ ಠೇಂಗಡಿ (ಮೂಲ), ಚಂದ್ರಶೇಖರ ಭಂಡಾರಿ (ಅನು), (2011), ಸಾಮಾಜಿಕ ಕ್ರಾಂತಿಸೂರ್ಯ ಡಾ. ಬಾಬಾ ಸಾಹೇಬ ಅಂಬೇಡ್ಕರ್, ರಾಷ್ಟೋತ್ಥಾನ ಸಾಹಿತ್ಯ, ಬೆಂಗಳೂರು.