ಕನ್ನಡ ಸಾಹಿತ್ಯಕ್ಕೆ ವಚನಕಾರರ ಕೊಡುಗೆ
Main Article Content
Abstract
ಕರ್ನಾಟಕದಲ್ಲಿ ಬಳಸಲಾಗುವ ಕನ್ನಡ ಭಾಷೆಯು ದೇಶದ ಪ್ರಮುಖ ಭಾಷೆಗಳಲ್ಲಿ ಒಂದಾಗಿದ್ದು ಭಾರತೀಯ ಮತ್ತು ಜಾಗತಿಕ ಸಂಸ್ಕೃತಿಗೆ ಸಾಹಿತ್ಯ, ಆಡಳಿತ, ವೈವಿಧ್ಯಮಯ ಅಭಿವ್ಯಕ್ತಿಯ ಮೂಲಕ ತನ್ನದೇ ಆದ ಕೊಡುಗೆ ನೀಡಿದೆ. ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಯ ಮೂಲಕ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಪಡೆದಿದೆ. ಆಡಳಿತ ಮತ್ತು ಸಾರ್ವಜನಿಕ ಜೀವನದಲ್ಲಿ ಕನ್ನಡವನ್ನು ಸಕ್ರಿಯವಾಗಿ ಬಳಸಲಾಗುತ್ತದೆ. ಈ ಮೂಲಕ ಕನ್ನಡ ಸಾಮಾಜಿಕ ಮತ್ತು ಆರ್ಥಿಕ ಪ್ರಶಂಸೆಗೆ ಪ್ರೋತ್ಸಾಹ ನೀಡಿದೆ. ದೇಶದ ಒಟ್ಟಾರೆ ಬೆಳವಣಿಗೆಯಲ್ಲಿ ಸಹಕರಿಸಿದೆ. ರಾಷ್ಟ್ರ ನಿರ್ಮಾಣದಲ್ಲಿ ಕನ್ನಡ ಭಾಷೆಯು ಅಖಂಡತೆ, ಸಾಂಸ್ಕೃತಿಕ ಸಂರಕ್ಷಣೆ, ಶಿಕ್ಷಣ ಮತ್ತು ಆರ್ಥಿಕ ಅಭಿವೃದ್ಧಿ ಹಾಗೂ ಪ್ರಾದೇಶಿಕ ಸೌಹಾರ್ದತೆಯನ್ನು ಉತ್ತೇಜಿಸುವಲ್ಲಿ ಪ್ರಮುಖವಾಗಿದೆ. ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾದ ಕನ್ನಡವು ಸುಮಾರು ೨೫೦೦ ವರ್ಷಗಳಷ್ಟು ಹಳೆಯದು. ಭಾರತದ ಸಂವಿಧಾನದ ಅಡಿಯಲ್ಲಿ ನಿಗದಿತ ಭಾಷೆಯಾಗಿದೆ, ಕನ್ನಡ ಸಾಹಿತ್ಯವು ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇಂತಹ ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ಸಾಹಿತ್ಯ ರೂಪಗಳು ಹಲವಾರು ಇದ್ದು, ಅದರಲ್ಲಿ ವಚನಕಾರರ ಕೊಡುಗೆ ಅಪಾರ. ಎಲ್ಲರನ್ನೂ ಸಮಾನತೆಯಿಂದ ಕಾಣುವ ದೃಷ್ಟಿಕೋನವನ್ನು ಪ್ರಚಾರ ಮಾಡಿದ ಶರಣರು ರಚಿಸಿದ ವಚನಗಳು ಸರಳ ಭಾಷೆಯಲ್ಲಿ ಬದುಕಿನ ಅನುಭವಗಳನ್ನು, ತತ್ವಗಳನ್ನು ಸಾಮಾನ್ಯ ಜನರಿಗೆ ತಿಳಿಯುವಂತೆ ಮಾಡಿದರು.
Article Details
Section

This work is licensed under a Creative Commons Attribution-NonCommercial-ShareAlike 4.0 International License.
How to Cite
References
ವಚನ ಸಂಚಯ, ಬುಕ್ ಬ್ರಹ್ಮ. ಅಂತರ್ಜಾಲ
ಮರುಳಸಿದ್ದಪ್ಪ ಕೆ, ನಾಗರಾಜು ಕಿ.ರಂ (೨೦೧೨), ವಚನ ಕಮ್ಮಟ. ಸ್ವಪ್ನಾ ಬುಕ್ ಹೌಸ್. ಬೆಂಗಳೂರು.