ಬಸವಣ್ಣನವರ ಪರಿವರ್ತನಾತ್ಮಕ ಮನೋಧರ್ಮ: ಅಂದು-ಇಂದು-ಮುಂದು
Main Article Content
Abstract
ಬಸವಣ್ಣನವರ ಪರಿವರ್ತನಾತ್ಮಕ ಮನೋಧರ್ಮ ಮತ್ತು 12ನೇ ಶತಮಾನದಲ್ಲಿ ಅವರು ಮಾಡಿದ ಸಾಮಾಜಿಕ ಸುಧಾರಣೆಗಳ ಪ್ರಸ್ತುತತೆಯನ್ನು ಈ ಲೇಖನವು ವಿಶ್ಲೇಷಿಸುತ್ತದೆ. ಬಸವಣ್ಣನವರು ವೇದ, ಶಾಸ್ತ್ರಾಧಾರಿತ ವೈದಿಕ ಪುರೋಹಿತಶಾಹಿಯ ದಬ್ಬಾಳಿಕೆ, ಜಾತಿ ಮತ್ತು ಲಿಂಗ ತಾರತಮ್ಯವನ್ನು ದಿಕ್ಕರಿಸಿ ಅನುಭವ ಮಂಟಪ ಎಂಬ ಪ್ರಜಾಸತ್ತಾತ್ಮಕ ವೇದಿಕೆಯನ್ನು ಸ್ಥಾಪಿಸಿದರು. ಇದು ಶೋಷಿತ ಸಮುದಾಯ ಮತ್ತು ಮಹಿಳೆಯರಿಗೆ ಆತ್ಮಗೌರವ, ಸಮಾನ ಹಕ್ಕು, ಲಿಂಗ ಸಮಾನತೆ ಮತ್ತು ಮುಕ್ತ ಅಭಿವ್ಯಕ್ತಿ ಒದಗಿಸಿತು. ಕಾಯಕವೇ ಕೈಲಾಸ ಮತ್ತು ದಾಸೋಹ ತತ್ವಗಳನ್ನು ಪ್ರತಿಪಾದಿಸುವ ಮೂಲಕ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸಮಾನತೆಗಾಗಿ ಶ್ರಮಿಸಿದರು. ಬಸವಣ್ಣನವರ ತತ್ವಗಳು ಮತ್ತು ವಚನ ಸಾಹಿತ್ಯದ ಮುಕ್ತ ಚಿಂತನೆಗಳು ಇಂದಿನ ಮಹಿಳಾ ಅಸಮಾನತೆ, ಭ್ರಷ್ಟಾಚಾರ ಮತ್ತು ಭಯೋತ್ಪಾದನೆಯಂತಹ ಜಾಗತಿಕ ಸವಾಲುಗಳಿಗೆ ಪರಿಹಾರ ಒದಗಿಸುವಲ್ಲಿ ಸಾರ್ವಕಾಲಿಕ ಪ್ರಸ್ತುತತೆಯನ್ನು ಹೊಂದಿವೆ ಎಂದು ಲೇಖನವು ಪ್ರತಿಪಾದಿಸುತ್ತದೆ.
Article Details
Issue
Section

This work is licensed under a Creative Commons Attribution-NonCommercial-ShareAlike 4.0 International License.
How to Cite
References
ಅರುಂಧತಿ ಎಫ್. ಬದಾಮಿ. (2025). ವಚನ ಸಾಹಿತ್ಯದಲ್ಲಿ ಪರಂಪರೆ ಮತ್ತು ಆಧುನಿಕತೆ. ಅಕ್ಷರಸೂರ್ಯ (AKSHARASURYA), 7(03 (Special Issue), 23 to 33.
ಮನುಕುಮಾರ್ ಎಸ್.ವಿ. (2025). ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ. ಅಕ್ಷರಸೂರ್ಯ (AKSHARASURYA), 6(04), 49 to 55.
ಕುಮಾರ ಹೆಚ್.ಸಿ. (2025). ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು. ಅಕ್ಷರಸೂರ್ಯ (AKSHARASURYA), 6(04), 19 to 26.
ನಾರಾಯಣ ಪಿ.ವಿ., (2008) ವಚನ ಸಾಹಿತ್ಯ : ಒಂದು ಸಾಂಸ್ಕೃತಿಕ ಅಧ್ಯಯನ, ವಸಂತ ಪ್ರಕಾಶನ, ಬೆಂಗಳೂರು.