ಡಾ. ಹೆಬ್ಬಾಲೆ ಕೆ. ನಾಗೇಶ ಅವರ ಬಾಡಿಗೆದೇವರು ಕಥೆ: ದಲಿತ ವಿಮರ್ಶೆ
Main Article Content
Abstract
ಡಾ. ಹೆಬ್ಬಾಲೆ ಕೆ. ನಾಗೇಶ ಅವರು ಕೊಡಗು ಮೂಲದವರು. ಈಗ ಹೊಸಪೇಟೆಯಲ್ಲಿ ನೆಲೆಸಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದಾರೆ. ಸಮಕಾಲೀನ ದಲಿತ ಕಥೆಗಾರರಲ್ಲಿ ಒಬ್ಬರು. ಇವರ ಬಾಡಿಗೆದೇವರು ಕಥಾ ಸಂಕಲನದಲ್ಲಿ 5 ಕಥೆಗಳಿವೆ. ಬಾಡಿಗೆ ದೇವರು ಕಥೆಯು ಕೊಡಗಿನ ದಲಿತರ ಬದಕನ್ನು ಎಳೆ ಎಳೆಯಾಗಿ ಚಿತ್ರಿಸುತ್ತದೆ. ಸವರ್ಣೀಯರು ಮತ್ತು ದಲಿತರ ನಡುವಿನ ಸಂಘರ್ಷವು ಕಥಾವಸ್ತುವಾಗಿದೆ. ದಲಿತ ಯುವಕರು ಸರಕಾರದ ಸೌಲಭ್ಯ ಪಡೆದು ಶಿಕ್ಷಣ ಪಡೆಯದೆ ಕೂಲಿ ಆಳುಗಳಾಗಿ ದುಡಿಯುವುದು, ಕೆಲಸ ಸಿಗದಿದ್ದಾಗ ಕುಡಿಯುವುದು, ಇಸ್ಪೀಟ್ ಆಡುವುದು ಮುಂತಾದ ದುಶ್ಚಟಗಳಿಗೆ ಬಲಿಯಾಗವುದನ್ನು ಮನಕಲಕುವಂತೆ ಚಿತ್ರಿಸಿದ್ದಾರೆ. ಉಪ್ಪಾರ ಗೆಡ್ಡೆಶೆಟ್ಟಿಯು ಊರ ಜನರಿಗೆ ದೇವರ ಹೆಸರಿನಲ್ಲಿ ಮಾಡುವ ಮೋಸವನ್ನು ಬಯಲಿಗೆಳೆಯುವಷ್ಟು ದಲಿತರು ಬಲಿಷ್ಟರು. ವ್ಯವಸ್ಥೆಯೊಂದಿಗೆ ರಾಜಿ ಮಾಡಿಕೊಳ್ಳಲು ಬಯಸುವ ಹಿರಿಯ ತಲೆಗಳು, ಅದನ್ನು ವಿರೋಧಿಸುವ ಯುವ ಮನಸ್ಸುಗಳ ಆತುರದ ನಿರ್ಧಾರ, ಅದರಿಂದ ಮೇಲ್ವರ್ಗದಿಂದ ಬಂದ ಬಹಿಷ್ಕಾರ, ದಲಿತರನ್ನು ಏಕಾಂಗಿಯಾಗಿಸಿದ ಪರಿಣಾಮ, ಪಕ್ಕದೂರಿಂದ ಮಾರೆವ್ವ ಎಂಬ ದೇವರನ್ನು ಬಾಡಿಗೆ ತಂದು ಹಬ್ಬ ಆಚರಿಸುವ ರೋಚಕತೆ ಹೃದಯಕಲಕುವಂತಿದೆ.
Article Details
Issue
Section

This work is licensed under a Creative Commons Attribution-NonCommercial-ShareAlike 4.0 International License.
References
ಹೆಬ್ಬಾಲೆ ಕೆ. ನಾಗೇಶ. (2010). ಬಾಡಿಗೆ ದೇವರು. ರುಚಿರ ಪ್ರಕಾಶನ, ಹೊಸಪೇಟೆ.