ಉತ್ತರ ರಾಮಾಯಣ ಆಧಾರಿತ ಕನ್ನಡ ಕಾವ್ಯಗಳು

Main Article Content

ಉಷಾ

Abstract

ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡಿರುವ ರಾಮಾಯಣ ಶಕ್ತಿಯುತ ಶ್ರವ್ಯಕಾವ್ಯವಾಗಿ ರಚನೆಯಾಗಿದ್ದು, ಈ ರಾಮಾಯಣದ ಮೂಲಕ ಸಾವಿರಾರು ವರ್ಷಗಳ ಹಿಂದಿನ ಇನ್ನು ಮುಂಬರುವ ಲಕ್ಷಾಂತರ ವರ್ಷಗಳ ಜನರ ಬದುಕಿಗೆ ಪ್ರಜ್ಞಾವಂತ ಪ್ರಗತಿಯನ್ನು, ಪ್ರಜ್ಞೆಯ ಜೀವನವನ್ನು ಕಟ್ಟಿ ಕೊಡುತ್ತದೆ. ವಾಲ್ಮೀಕಿ ವಿರಚಿತ ರಾಮಾಯಣದ ಉತ್ತರ ರಾಮಾಯಣ ಭಾಗವು 14 ವರ್ಷ ವನವಾಸ ಮುಗಿಸಿ ಸೀತೆಯನ್ನು ಅಪಹರಿಸಿದ್ದ ರಾವಣನನ್ನು ಸಂಹರಿಸಿ, ಅಯೋಧ್ಯೆಗೆ ಹಿಂತಿರುಗಿ, ಪಟ್ಟಾಭಿಷೇಕವಾದ ನಂತರದ ಭಾಗವೇ ಉತ್ತರ ರಾಮಾಯಾಣ. ಈ ಭಾಗ ಪ್ರಕ್ಷಿಪ್ತ ಎಂಬ ವಾದ ವಿವಾದಗಳು ನಡೆದರೂ ಉತ್ತರ ರಾಮಾಯಣಕ್ಕೆ ಸಂಬಂಧಿಸಿದ ಹಲವಾರು ಭಾಗಶಃ ಹಾಗೂ ಪೂರ್ಣ ಪ್ರಮಾಣದ ಕೃತಿಗಳು ಕನ್ನಡದಲ್ಲಿ ರಚನೆಯಾದವು. ಕನ್ನಡ ಉತ್ತರ ರಾಮಾಯಣದಲ್ಲಿ ನಾರಾಯಣ, ನರಸ, ತಿರುಮಲೆ ವೈದ್ಯ, ಯೋಗೀಂದ್ರ, ಸೋಸಲೆ ಅಯ್ಯಶಾಸ್ತ್ರಿ ಇವರು ಕೃತಿ ರಚನೆ ಮಾಡಿದರೂ, ಕನ್ನಡ ಸಾಹಿತ್ಯದಲ್ಲಿ ಅಲಕ್ಷ್ಯಕ್ಕೆ ಒಳಪಟ್ಟ ಕವಿಗಳು. ಸಂಸ್ಕೃತ ರಾಮಾಯಣದ ವಸ್ತುವನ್ನು ಅನುಸರಿಸಿ ಕನ್ನಡ ಉತ್ತರ ರಾಮಾಯಣ ಕೃತಿಯನ್ನು ಸಮರ್ಥವಾಗಿ ರಚಿಸಿದರೂ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದಿಲ್ಲ. ಸುಮಾರು 15ನೇ ಶತಮಾನದಿಂದ 19ನೇ ಶತಮಾನದವರೆಗೆ ಕನ್ನಡದಲ್ಲಿ ರಚಿತವಾಗಿರುವ ಉತ್ತರ ರಾಮಾಯಣಕ್ಕೆ ಸಂಬಂಧಿಸಿದ ಕಾವ್ಯ ಕೃತಿಗಳಲ್ಲಿ ಲಕ್ಷ್ಮೀಶನನ್ನು ಹೊರತುಪಡಿಸಿದರೆ, ಪೂರ್ಣ ಪ್ರಮಾಣದಲ್ಲಿದ್ದ ಉತ್ತರ ರಾಮಾಯಣ ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ ಕವಿಗಳ ಹಾಗೂ ಅವರ ಕಾವ್ಯಗಳನ್ನು ಕನ್ನಡ ಸಾಹಿತ್ಯಕ್ಕೆ ತಿಳಿಸುವ ಉದ್ದೇಶವಾಗಿದೆ.

Article Details

Section

Research Articles

Author Biography

ಉಷಾ

ಸಂಶೋಧನಾ ವಿದ್ಯಾರ್ಥಿ, ಎಸ್.ವಿ.ಪಿ ಕನ್ನಡ ಅಧ್ಯಯನ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿ, ಮಂಗಳೂರು.

References

ಕೃಷ್ಣಮೂರ್ತಿ ಕೆ. (1994). ಕನ್ನಡ ಉತ್ತರರಾಮ ಚರಿತೆ. ಕಾವ್ಯಾಲಯ. ಮೈಸೂರು. ಲಕ್ಷ್ಮಣ ವಿರುಪಾಕ್ಷ ಜೋಶಿ. (1989). ಉತ್ತರ ರಾಮಾಯಣ. ಪ್ರತಿಭಾ ಗ್ರಂಥಮಾಲೆ. ಧಾರವಾಡ. ಸರಸ್ವತಿ ಟಿ. ಎಂ. (2000). ಕನ್ನಡದಲ್ಲಿ ಉತ್ತರ ರಾಮ ಕಥಾ ಕಾವ್ಯಗಳು. ರೂಪ ಪ್ರಕಾಶನ. ಮೈಸೂರು. ಮಾಸ್ತಿ ವೆಂಕಟೇಶ್ ಅಯ್ಯಂಗಾರ್. (1955), ಆದಿಕವಿ ವಾಲ್ಮೀಕಿ. ಜೀವನ ಕಾರ್ಯಾಲಯ. ಬೆಂಗಳೂರು.

ಮಾಸ್ತಿ. ಆದಿಕವಿ ವಾಲ್ಮೀಕಿ. ಜೀವನ ಕಾಯಾಲಯ, ಬೆಂಗಳೂರು. ಪು.ಸಂ. 16 ಸರಸ್ವತಿ ಟಿ. ಎಂ. (2000). ಕನ್ನಡದಲ್ಲಿ ಉತ್ತರ ರಾಮ ಕಥಾ ಕಾವ್ಯಗಳು. ರೂಪ ಪ್ರಕಾಶನ. ಮೈಸೂರು. ಪು.ಸಂ. 6 ಪುಲಸ್ಕರ್ ಎಮ್. ಡಿ. ಯುಗಯಾತ್ರಿ (ಲೇ). ಭಾರತೀಯ ಸಂಸ್ಕೃತಿ. ಪ್ರಸರಾಂಗ, ಮೈಸೂರು ವಿಶ್ವವಿದ್ಯಾನಿಲಯ. ಮೈಸೂರು. ಪು.ಸಂ. 12