ವಚನಗಳಲ್ಲಿ ಖಗೋಳ ವಿಜ್ಞಾನ

Main Article Content

ಸುಪ್ರಿಯಾ ಮಲಶೆಟ್ಟಿ

Abstract

ವಿಜ್ಞಾನ ಮತ್ತು ಆಧ್ಯಾತ್ಮಿಕತೆಯು ಒಂದೇ ಸತ್ಯವನ್ನು ಎರಡು ರೀತಿಯಲ್ಲಿ ಕಾಣುವುದು. ಬ್ರಹ್ಮಾಂಡ ಮತ್ತು ಪಿಂಡಾಂಡ, ಬಾಹ್ಯ ಜಗತ್ತು ಮತ್ತು ಆಂತರಿಕ ಜಗತ್ತು ಎಂಬ ಎರಡು ಜಗತ್ತುಗಳಿವೆ. ಅನುಭವದಿಂದ ಈ ಎರಡು ಕ್ಷೇತ್ರಗಳಿಂದಲೂ ನಮಗೆ ಸತ್ಯ ದೊರಕುವುದು. ಆಂತರಿಕ ಅನುಭವದಿಂದ ಸಂಗ್ರಹಿಸಿರುವುದೇ ಮನಶಾಸ್ತ್ರ , ತತ್ವಶಾಸ್ತ್ರ ಮತ್ತು ಧರ್ಮ. ಬಾಹ್ಯ ಜಗತ್ತಿನಿಂದ ನಮಗೆ ಭೌತವಿಜ್ಞಾನಗಳು ದೊರಕುವವು. ಪೂರ್ಣವಾದ ಸತ್ಯವು ಎರಡು ಕ್ಷೇತ್ರಗಳಿಂದ ಬರುವ ಅನುಭವಗಳಿಗೆ ವಿರೋಧವಿಲ್ಲದೆ ಇರಬೇಕು. ಪಿಂಡಾಂಡವು ಬ್ರಹ್ಮಾಂಡಕ್ಕೆ ಪ್ರಮಾಣವಾಗಿರಬೇಕು. ಸತ್ಯವು ಯಾವ ಕ್ಷೇತ್ರಕ್ಕೆ ಸೇರಿದ್ದರು ಪರಸ್ಪರ ವಿರೋಧಗಳಿರುವುದಿಲ್ಲ ಆಂತರಿಕ ಸತ್ಯಕ್ಕೂ ಬಾಹ್ಯ ಸತ್ಯಕ್ಕೂ ಪರಸ್ಪರ ವಿರೋಧವಿಲ್ಲ. 

Article Details

Section

Research Articles

Author Biography

ಸುಪ್ರಿಯಾ ಮಲಶೆಟ್ಟಿ

ಸಹಾಯಕ ಪ್ರಾಧ್ಯಾಪಕರು, ಕನ್ನಡ ವಿಭಾಗ, ಎಸ್.ಜೆ.ಎಂ.ವಿ.ಎಸ್. ಕಲಾ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯ, ಜೆ.ಸಿ. ನಗರ, ಹುಬ್ಬಳ್ಳಿ.

References

ಹಿರೇಮಠ ಆರ್. ಸಿ. & ಸುಂಕಾಪುರ ಎಂ. ಎಸ್. (ಸಂ). (1976). ಅಲ್ಲಮ ಪ್ರಭುದೇವರ ವಚನಗಳು. ಕನ್ನಡ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ. ಧಾರವಾಡ.

ಮಲ್ಲಾಪುರ್ ಬಿ. ವಿ. (ಸಂ). (2001). ಅಲ್ಲಮ ಪ್ರಭುದೇವರ ವಚನ ಸಂಪುಟ. ಕನ್ನಡ ಪುಸ್ತಕ ಪ್ರಾಧಿಕಾರ. ಬೆಂಗಳೂರು.

ಗೋರೂರು ಚೆನ್ನಬಸಪ್ಪ. (1992). ವಚನ ಚಿಂತನ. ಶ್ರೀ ಸರ್ಪಭೂಷಣ ಶಿವಯೋಗಿಶ್ವರ ಮಠ. ಬೆಂಗಳೂರು.

ನಾರಾಯಣ ಪಿ. ವಿ. (1994). ವಚನ ಪರಿಸರ. ತಂಗಾಳಿ. ಬೆಂಗಳೂರು.

ಶ್ರೀನಿವಾಸಮೂರ್ತಿ ಎಂ. ಆರ್. (1947). ವಚನಧರ್ಮ ಸಾರ. ಮೈಸೂರು ವಿಶ್ವವಿದ್ಯಾನಿಲಯ. ಮೈಸೂರು.

ವೀರಣ್ಣ ರಾಜೂರ. (1994). ವಚನ ಅಧ್ಯಯನ. ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠ. ಮುಂಡರಿಗೆ.

ವಿಸಾಜಿ ಜೆ. ಬಿ. (2008). ವಚನ ಸಂಪದ. ಶ್ರೀ ಚನ್ನಬಸವೇಶ್ವರ ಸಂಸ್ಥಾನ ಹಿರೇಮಠ ಸುಕ್ಷೇತ್ರ. ಹಾರಕೊಡು.

ತಿಪ್ಪೇರುದ್ರಸ್ವಾಮಿ ಹೆಚ್. (1977). ಸಾಹಿತ್ಯ: ವೈಚಾರಿಕ ಅಧ್ಯಯನ. ಕರ್ನಾಟಕ ವಿಶ್ವವಿದ್ಯಾಲಯ. ಧಾರವಾಡ.